Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಕಾದಿ ಗೆಲಿಸಯ್ಯ ಎನ್ನನು
ಕಾದಿ ಗೆಲಿಸಯ್ಯ ಎನ್ನನು
April 29, 2018
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಶಿವಾಚಾರ
ಶಿವಾಚಾರ
April 9, 2021
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
Copyright © 2025 Bayalu