Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
Copyright © 2025 Bayalu