Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಶರಣ- ಎಂದರೆ…
ಶರಣ- ಎಂದರೆ…
March 6, 2020
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
Copyright © 2026 Bayalu