Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ನಾನು ಯಾರು?
ನಾನು ಯಾರು?
December 8, 2021
ಶಾಂತಿ
ಶಾಂತಿ
April 11, 2025
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
Copyright © 2026 Bayalu