Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ನಾನೆಂಬ ನಿನಾದ…
ನಾನೆಂಬ ನಿನಾದ…
January 15, 2026
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
Copyright © 2026 Bayalu