Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಶಾಂತಿ
ಶಾಂತಿ
April 11, 2025
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
Copyright © 2026 Bayalu