Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು… ನನ್ನದು
ನಾನು… ನನ್ನದು
July 4, 2021
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ನೆಲದ ನಿಧಾನ
ನೆಲದ ನಿಧಾನ
April 29, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಮನಸ್ಸು
ಮನಸ್ಸು
September 7, 2020
ದೇಹ ದೇವಾಲಯ
ದೇಹ ದೇವಾಲಯ
June 12, 2025
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
Copyright © 2025 Bayalu