Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...
ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
Copyright © 2026 Bayalu