Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...
ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನ ಶರಣರು…
ನನ್ನ ಶರಣರು…
April 9, 2021
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ನಾನು ಯಾರು?
ನಾನು ಯಾರು?
December 8, 2021
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
Copyright © 2026 Bayalu