Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಕಾದಿ ಗೆಲಿಸಯ್ಯ ಎನ್ನನು
ಕಾದಿ ಗೆಲಿಸಯ್ಯ ಎನ್ನನು
April 29, 2018
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
Copyright © 2026 Bayalu