Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...
ಸಂತೆಯ ಸಂತ
Share:
Poems

ಸಂತೆಯ ಸಂತ

September 7, 2020 ಜ್ಯೋತಿಲಿಂಗಪ್ಪ
ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave a Reply to Kavyashree Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ನನ್ನೆದುರು ನಾ…
ನನ್ನೆದುರು ನಾ…
March 6, 2024
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
Copyright © 2025 Bayalu