Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ಬೆಳಕಿನ ಹುಳು
Share:
Poems

ಬೆಳಕಿನ ಹುಳು

December 9, 2025 ಜ್ಯೋತಿಲಿಂಗಪ್ಪ
ನನ್ನೀ ಮದವ ಸುಡಲು ಬರುವ ಬೆಳಕಿನ ಹುಳು ಹಗಲು ದೃಷ್ಟಿ ಮರೆ ಇರುಳು ಕಣ್ಣ ಮರೆ ಕತ್ತಲಲಿ ಮಿನುಗುವುದು ಏ ಕಣ್ಣೇ ದೃಷ್ಟಿಯ ಮರೆ ಮಾಡದಿರು ಇದು ಬರಿಯೆ ಹುಳು ಅಲ್ಲಾ ಬೆಳಕಿನ ಹುಳು...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave a Reply to Shambhulingaiah Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ನೆಲದ ನಿಧಾನ
ನೆಲದ ನಿಧಾನ
April 29, 2018
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
Copyright © 2026 Bayalu