Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave a Reply to Shambhulingaiah Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ನನ್ನೆದುರು ನಾ…
ನನ್ನೆದುರು ನಾ…
March 6, 2024
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
Copyright © 2025 Bayalu