Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ…
Share:
Poems August 8, 2021 ಜ್ಯೋತಿಲಿಂಗಪ್ಪ

ಹುಡುಕಾಟ…

ಈ
ಮರವೆ
ಯಾವಾಗ ಬರುತ್ತೋ
ಕಾಯುತಾ ಕುಳಿತಿರುವೆ

ಅಲೆದಾಡಿ ಕಾಲು ಸೋತಿವೆ
ಹುಡುಕಾಡಿ ಕಣ್ಣು ಸೋತಿವೆ

ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ
ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ

ಕೊಟ್ಟಿಗೆಯಲಿ ಕಟ್ಟಿ ಹಾಕಿರುವ
ಎತ್ತಿನ ಹೆಗಲೊಳಗೆ ಸುಕ್ಕುಸುಕ್ಕು
ಪಕ್ಕದ ಹೆಂಡದಂಗಡಿಯ ಹುಳಿ
ವಾಸನೆ ಮರೆಯದೆ ಕಟ್ಟಿದೆ

ಕಾಣುತಿದೆ
ನೀರ ಒಳಗಣ ಚಂದಿರನ ಬಿರುಕು
ಈಗಲೂ…

ಹೋದವರು ಹೋದ ದಾರಿ
ತಿರುಗಿ ಬಾರದ ದಾರಿಯಲಿ
ಕುಳಿತಿರುವೆ

ಹೆಜ್ಜೆ ಗುರುತು ಮರೆಯುವ ಮೊದಲು
ಕೊಟ್ಟಿಗೆಯಿಂದ ತಪ್ಪಿಸಿಕೊಂಡ ಹೋರಿ
ಹುಡುಕಬೇಕು ಮರೆಯದೆ.

Previous post ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
Next post ಅರಿವು-ಮರೆವಿನಾಟ
ಅರಿವು-ಮರೆವಿನಾಟ

Related Posts

ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
ಒಂದಾಗಿ ನಿಂತೆ…
Share:
Poems

ಒಂದಾಗಿ ನಿಂತೆ…

April 6, 2024 ಕೆ.ಆರ್ ಮಂಗಳಾ
ಆಗೀಗ ನೀರು ಕಾಣುವ ಮಧುಮಾಲತಿ ಬಳ್ಳಿಯಲಿ ತೊನೆವ ಕೆಂಪು-ಬಿಳಿ ಹೂಗಳು ಪಕ್ಕದಲ್ಲೇ ನಸುಗಂಪಿನ ದುಂಡು ಮಲ್ಲಿಗೆಯ ದಂಡು ದೇಟಿನ ತುಂಬ ಬಣ್ಣಬಣ್ಣದ ದಾಸವಾಳ, ಅರೆಬೆತ್ತಲಾದ ಸಂಪಿಗೆ...

Comments 3

  1. Kavyashree
    Aug 9, 2021 Reply

    ಹೌದು ಸರ್, ನಮ್ಮ ಪಂಚೇಂದ್ರಿಯಗಳೆಲ್ಲಾ ಅರಗಿಸಿಕೊಳ್ಳಲಾಗದ ರುಚಿಯ ಕಂಡಿವೆ- ಕವನ ಬಹಳ ಸೊಗಸಾಗಿದೆ.

  2. Shambhulingaiah
    Aug 14, 2021 Reply

    ತಿರುಗಿ ಬಾರದ ದಾರಿಯಲಿ
    ಕುಳಿತಿರುವೆ- ಮತ್ತೇ ಬಾರದ ದಾರಿಯನ್ನು ಸವೆಸುತ್ತಿದ್ದೇವೆ- ಸುಂದರ, ಅರ್ಥಗರ್ಭಿತ ಕವನ.

  3. Padmalaya
    Aug 21, 2021 Reply

    ಜೋತಿಲಿಂಗಪ್ಪನವರ ಕಾವ್ಯ ಸಂಚಿಕೆಯಲ್ಲಿ ಈ ಕವನ ನನಗೆ ಆಕರ್ಷಣೀಯವಾದದ್ದು.ಏಕೆಂದರೆ..ಅವರ ಕವನ ವಿಧಾನದಲ್ಲಿ ರೂಪಕಗಳು ಕರುಳು ಕೊಯ್ಸಿಕೊಳ್ಳುತ್ತವೆ.ಈ ಕವನದಲ್ಲಿ ತುಂಬಾ ಫಲವತ್ತಾಗಿ ರೂಪಕದ ಬೆಳೆ ತೆಗಯುತ್ತಾರೆ.”ಪಕ್ಕದ ಹೆಂಡದಂಗಡಿಯ ಹುಳಿ ವಾಸನೆ.” “ಅರಗಿಸಲಾರದ ರುಚಿ ಕಂಡಿದೆ ನಾಲಿಗೆ”…ಇಂತಹ ರೂಪಕಗಳು ಅಂತರಂಗದ ಆಳದಲ್ಲಿ ಮಡುಗಟ್ಟಿರುವ ಗಬ್ಬು ಗಲೀಜನ್ನ ಹಂಗಿಲ್ಲದೇ ಪ್ರಶ್ನಿಸುತ್ತವೆ…ಅವರ ಕಾವ್ಯ ಝರಿಗಾಗಿ ಅವರಿಗೊಂದು ಸಲಾಂ…..!!!!!!!!!!!

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
Copyright © 2025 Bayalu