Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...
ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಕಣ್ಣ ದೀಪ
ಕಣ್ಣ ದೀಪ
September 7, 2021
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
Copyright © 2025 Bayalu