Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...
ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ವೀರ
ವೀರ
April 29, 2018
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
Copyright © 2026 Bayalu