Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ರೆಕ್ಕೆ ಬಿಚ್ಚಿ…
Share:
Poems

ರೆಕ್ಕೆ ಬಿಚ್ಚಿ…

May 8, 2024 ಕೆ.ಆರ್ ಮಂಗಳಾ
‘ವರ್ಚ್ಯುವಲ್ ವರ್ಲ್ಡ್’ ಎನುವುದು ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ… ಅದರದು ಅನಾದಿ ಇತಿಹಾಸ ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ ಸೂರ್ಯನ ಸುತ್ತ ಭೂಮಿ ಸುತ್ತಿದರೆ ಇದರ...
ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಸನಾತನ ಧರ್ಮ
ಸನಾತನ ಧರ್ಮ
October 10, 2023
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಕನ್ನಡಿ ನಂಟು
ಕನ್ನಡಿ ನಂಟು
October 10, 2023
Copyright © 2026 Bayalu