Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave a Reply to Manohara acharya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಸೂರ್ಯ
ಸೂರ್ಯ
January 8, 2023
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
Copyright © 2026 Bayalu