Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave a Reply to Manohara acharya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಬಯಲಾಟ
ಬಯಲಾಟ
March 17, 2021
ದಾಸೋಹ ತತ್ವ
ದಾಸೋಹ ತತ್ವ
January 10, 2021
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಭಾರ
ಭಾರ
October 6, 2020
Copyright © 2025 Bayalu