Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
ನಿಜ ನನಸಿನ ತಾವ…
Share:
Poems

ನಿಜ ನನಸಿನ ತಾವ…

July 10, 2023 ಕೆ.ಆರ್ ಮಂಗಳಾ
ಕಣ್ಣು ಮುಚ್ಚಿದಾಗ ಬರುವ ಕನಸಿಗೂ ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ ಏನಿಹುದು ಅಂತರ? ನಗು, ಅಳು, ನೋವು, ಸಂಕಟ… ಅನುಭವದಲ್ಲಿ ಅದ್ದಿ ತೆಗೆದಂತೆ ಎಲ್ಲ ಎದುರೆದುರೇ ನಡೆದಂತೆ!...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave a Reply to H V Jaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಭವ ರಾಟಾಳ
ಭವ ರಾಟಾಳ
September 10, 2022
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
Copyright © 2026 Bayalu