Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave a Reply to ಪೆರೂರು ಜಾರು, ಉಡುಪಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಹಣತೆಯ ಹಂಗು
ಹಣತೆಯ ಹಂಗು
October 19, 2025
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
Copyright © 2026 Bayalu