Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಿಕೊಡು ಗುರುವೇ…
Share:
Poems July 4, 2022 ಕೆ.ಆರ್ ಮಂಗಳಾ

ಹುಡುಕಿಕೊಡು ಗುರುವೇ…

ದೇಹದಲ್ಲೋ ಭಾವದಲ್ಲೋ
ಎದೆಯ ಒಳಗೋ ತಲೆಯ ಒಳಗೋ
ಕಳೆದುಹೋಗಿದ್ದೇನೆ ನಾನು
ಕಳೆದುಹೋಗಿದ್ದೇನೆ…

ಕುಲದಲ್ಲೋ ಛಲದಲ್ಲೋ
ಹಠದಲ್ಲೋ ಅಹಮಿನಲ್ಲೋ
ಸೇರಿಹೋಗಿದ್ದೇನೆ ನಾನು
ಸೇರಿಹೋಗಿದ್ದೇನೆ…

ಸಂಗದಲ್ಲೋ ಸಂಸಾರದಲ್ಲೋ
ಸ್ನೇಹದಲ್ಲೋ ಪ್ರೇಮದಲ್ಲೋ
ಮುಳುಗಿಹೋಗಿದ್ದೇನೆ ನಾನು
ಮುಳುಗಿಹೋಗಿದ್ದೇನೆ…

ನೆನಪಿನಲ್ಲೋ ಕನಸಿನಲ್ಲೋ
ಮಾತಿನಲ್ಲೋ ಮೌನದಲ್ಲೋ
ಕರಗಿ ಹೋಗಿದ್ದೇನೆ ನಾನು
ಕರಗಿ ಹೋಗಿದ್ದೇನೆ…

ಬರೆಯುತಿರುವ ಅಕ್ಷರಗಳಲ್ಲೋ
ಕಲೆ ಹಾಕಿದ ಮಾಹಿತಿಯೊಳಗೋ
ಮಸುಕಾಗಿದ್ದೇನೆ
ಕಳೆದು ಹೋದ ಕಾಲದಲ್ಲೋ
ನಾಳೆ ಬರುವ ದಿನಗಳಲ್ಲೋ
ಜಾರಿಹೋಗಿದ್ದೇನೆ…

ಮತಿಗೆಟ್ಟು ಧೃತಿಗೆಟ್ಟು
ಮುಂದ ತಿಳಿಯದೇ, ಗೊತ್ತನರಿಯದೇ
ನಡೆವ ದಾರಿಯಲ್ಲಿ ದಿಕ್ಕುತಪ್ಪಿದ್ದೇನೆ
ಹುಡುಕಿಕೊಡು ಗುರುವೆ
ನನ್ನ ನನಗೆ ಹುಡುಕಿಕೊಡು.

Previous post ಮರೆತೆ…
ಮರೆತೆ…
Next post ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ

Related Posts

ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...
ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...

Comments 3

  1. Manohara acharya
    Jul 5, 2022 Reply

    ನಮಸ್ತೆ ಮಂಗಳ.ಹುಡುಕಿ ಕೊಡಿ ಗುರುವೇ ಮತ್ತು ನನ್ನ ನಿನ್ನ ನಡುವೆ ಬಹಳ ಸೊಗಸಾಗಿದೆ. ಇನ್ನು ಹೆಚ್ಚು ಹೆಚ್ಚು ಹೊರಬರಲಿ ಎಂದು ಆಶಿಸುತ್ತೇನೆ.ಪ್ರೀತಿ ಇರಲಿ

  2. H V Jaya
    Jul 6, 2022 Reply

    ಕವನ ಬಹಳ ಅರ್ಥಗರ್ಭಿತವಾಗಿದೆ… ನಾನೂ ಅಜ್ಞಾನದ ಕತ್ತಲೆಯೊಳಗೆ ಕಳದುಹೋಗಿದ್ದೇನೆ. ಸುಜ್ಞಾನವನ್ನು ನೀಡಿ ಹುಡುಕಿ ಕೊಡಿ ಗುರುವೆ…

  3. ಪೆರೂರು ಜಾರು, ಉಡುಪಿ
    Jul 7, 2022 Reply

    ಕಳೆದುಕೊಂಡವರನ್ನು ಹುಡುಕಿಕೊಡುವ ಗುರುಗಳು ಇಂದೂ ಇದ್ದಾರೆಯೆ? ಪೋಲೀಸರಂತೂ ಕಳೆದುಕೊಂಡವರಿಂದ ತಮಗೇನು ಲಾಭ ಎಂದು ತಿಳಿದ ಬಳಿಕ ಹುಡುಕುತ್ತಾರೆ.

Leave a Reply to ಪೆರೂರು ಜಾರು, ಉಡುಪಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ಶರಣ- ಎಂದರೆ…
ಶರಣ- ಎಂದರೆ…
March 6, 2020
Copyright © 2025 Bayalu