Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
July 10, 2025
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
Copyright © 2025 Bayalu