Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ಗೇಣು ದಾರಿ
Share:
Poems

ಗೇಣು ದಾರಿ

July 10, 2023 ಜ್ಯೋತಿಲಿಂಗಪ್ಪ
ಮುಂದಿನ ಕಾಲು ಹಿಂದಕೆ ಬಾರದೇ ಹಿಂದಿನ ಕಾಲು ಮುಂದಕೆ ಬಾರದೇ ಹಿಂದು ಮುಂದು ಸಂತೆ ದಾರಿ ತನ್ನರಿವೇ ತನ್ನ ಕುರುಹು ತನ್ನ ಕುರುಹೇ ತನ್ನರಿವು ಹಿಂದು ಮುಂದಾದು ಪೂಜಿಸಿದೆ ಭಕ್ತಿ...
ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಮನವೇ ಮನವೇ…
ಮನವೇ ಮನವೇ…
May 6, 2020
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
Copyright © 2025 Bayalu