Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ನನ್ನ ಶರಣರು…
ನನ್ನ ಶರಣರು…
April 9, 2021
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ದಾರಿ ಬಿಡಿ…
ದಾರಿ ಬಿಡಿ…
December 6, 2020
Copyright © 2026 Bayalu