Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಭಾರ
ಭಾರ
October 6, 2020
ಈ ಬಳ್ಳಿ…
ಈ ಬಳ್ಳಿ…
October 21, 2024
Copyright © 2026 Bayalu