Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಶಿವನ ಕುದುರೆ…
ಶಿವನ ಕುದುರೆ…
May 1, 2019
ಗುಟುಕು ಆಸೆ…
ಗುಟುಕು ಆಸೆ…
May 8, 2024
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
Copyright © 2026 Bayalu