Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave a Reply to ದಯಾಶಂಕರ ಮಧುಗಿರಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಮನವೇ ಮನವೇ…
ಮನವೇ ಮನವೇ…
May 6, 2020
ಆಫ್ರಿಕಾದ ಸೂರ್ಯ
ಆಫ್ರಿಕಾದ ಸೂರ್ಯ
December 13, 2024
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಯೋಗ – ಶಿವಯೋಗ
ಯೋಗ – ಶಿವಯೋಗ
August 2, 2019
Copyright © 2026 Bayalu