Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೆಸರಿಲ್ಲದಾ ಊರಿನ ಹಾಡು
Share:
Poems May 6, 2020 ಪದ್ಮಾಲಯ ನಾಗರಾಜ್

ಹೆಸರಿಲ್ಲದಾ ಊರಿನ ಹಾಡು

ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ
ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ//

ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ
ಶೋಕಿ ದಾರಿಯು ತಾನೇ ಆಗುತಾ/ ಮಾಯೆಯೊಳಗೇ ಹಬ್ಬತೋ //ಅ.ಪ//

ಮೂರು ದಾರಿ ಸೇರೋ ಜಾಗದಿ ಗೂಡು ಕಟ್ಟಿ ಕುಣಿಯಿತೋ
ಗಂಡೂ ಅಲ್ಲಾ ಹೆಣ್ಣು ಅಲ್ಲದು/ ಆಟತಿಳಿದು ನಡೆಯಿರೋ //ಚಿಂತೆ//

ಹರಿವು ನದಿದಡಲಿ ಬೆಳೆದಾ/ ದಿಕ್ಕುಗಾಣದ ಮರವಿದೋ
ತಾಯಿ ತಂದೆ ಇದಕಾರಿಲ್ಲ/ ಹುಚ್ಚು ಕುದುರೆ ಪಯಣವೋ //ಚಿಂತೆ//

ರಂಕುಮುಂಡೆಯ ಮಡಿಲಲಿ ಚಿಂತೆ/ ಇಲ್ಲದೇ ತಾ ತೋರಿತೋ
ದಾಟ ಹೋಗಿ ಇದನೂ ಗೆದ್ದರು/ ಕೋಟಿಗೊಬ್ಬರು ನಿಜವಹುದೋ //ಚಿಂತೆ//

ಹೆಸರಾ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲು ಇದ್ದಿತೋ
ಮೂರನಾಗಿಸಿ ಕೊಂದೇ ಹಾಕಿತ/ ಇದರ ನಿಜವನು ಅರಿಯಿರೋ.

-ಪದ್ಮಾಲಯ ನಾಗರಾಜ್

Previous post ಮನವೇ ಮನವೇ…
ಮನವೇ ಮನವೇ…
Next post WHO AM I?
WHO AM I?

Related Posts

ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 3

  1. Jyothilingappa
    May 7, 2020 Reply

    ಪದ್ಮಾಲಯ ರ ಕವನ ಸರಳ ಅರ್ಥಗರ್ಭಿತ.. ಹಾಡುವ ದಾಟಿ..ರಚನೆ.. ಸುಂದರ.

  2. Gangadhar navale
    May 14, 2020 Reply

    ಮನಸ್ಸಿನಲ್ಲಿರುವ ಚಿಂತೆಯೇ ಹಾವೆಂದುಕೊಂಡಿದ್ದೆ, ಚಿಂತೆಯೊಳಗೆ ಇರೋ ಹಾವು ಯಾವುದು? ಚಿಂತೆಯಲ್ಲಿರುವ ಹಾವು ಭ್ರಮೆಯೇ ಇರಬಹುದೆಂದುಕೊಂಡೆ.

  3. Chandru pujar
    Aug 25, 2020 Reply

    Dhanyvad Sar Tumba chennagide

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ವಚನ–ಶ್ರಮಣಧಾರೆಗಳ ಸಂಧಿಭೂಮಿ
ವಚನ–ಶ್ರಮಣಧಾರೆಗಳ ಸಂಧಿಭೂಮಿ
April 5, 2026
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
Copyright © 2026 Bayalu