Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೆಸರಿಲ್ಲದಾ ಊರಿನ ಹಾಡು
Share:
Poems May 6, 2020 ಪದ್ಮಾಲಯ ನಾಗರಾಜ್

ಹೆಸರಿಲ್ಲದಾ ಊರಿನ ಹಾಡು

ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ
ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ//

ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ
ಶೋಕಿ ದಾರಿಯು ತಾನೇ ಆಗುತಾ/ ಮಾಯೆಯೊಳಗೇ ಹಬ್ಬತೋ //ಅ.ಪ//

ಮೂರು ದಾರಿ ಸೇರೋ ಜಾಗದಿ ಗೂಡು ಕಟ್ಟಿ ಕುಣಿಯಿತೋ
ಗಂಡೂ ಅಲ್ಲಾ ಹೆಣ್ಣು ಅಲ್ಲದು/ ಆಟತಿಳಿದು ನಡೆಯಿರೋ //ಚಿಂತೆ//

ಹರಿವು ನದಿದಡಲಿ ಬೆಳೆದಾ/ ದಿಕ್ಕುಗಾಣದ ಮರವಿದೋ
ತಾಯಿ ತಂದೆ ಇದಕಾರಿಲ್ಲ/ ಹುಚ್ಚು ಕುದುರೆ ಪಯಣವೋ //ಚಿಂತೆ//

ರಂಕುಮುಂಡೆಯ ಮಡಿಲಲಿ ಚಿಂತೆ/ ಇಲ್ಲದೇ ತಾ ತೋರಿತೋ
ದಾಟ ಹೋಗಿ ಇದನೂ ಗೆದ್ದರು/ ಕೋಟಿಗೊಬ್ಬರು ನಿಜವಹುದೋ //ಚಿಂತೆ//

ಹೆಸರಾ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲು ಇದ್ದಿತೋ
ಮೂರನಾಗಿಸಿ ಕೊಂದೇ ಹಾಕಿತ/ ಇದರ ನಿಜವನು ಅರಿಯಿರೋ.

-ಪದ್ಮಾಲಯ ನಾಗರಾಜ್

Previous post ಮನವೇ ಮನವೇ…
ಮನವೇ ಮನವೇ…
Next post WHO AM I?
WHO AM I?

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಬೆಳಕಿನ ಹುಳು
Share:
Poems

ಬೆಳಕಿನ ಹುಳು

December 9, 2025 ಜ್ಯೋತಿಲಿಂಗಪ್ಪ
ನನ್ನೀ ಮದವ ಸುಡಲು ಬರುವ ಬೆಳಕಿನ ಹುಳು ಹಗಲು ದೃಷ್ಟಿ ಮರೆ ಇರುಳು ಕಣ್ಣ ಮರೆ ಕತ್ತಲಲಿ ಮಿನುಗುವುದು ಏ ಕಣ್ಣೇ ದೃಷ್ಟಿಯ ಮರೆ ಮಾಡದಿರು ಇದು ಬರಿಯೆ ಹುಳು ಅಲ್ಲಾ ಬೆಳಕಿನ ಹುಳು...

Comments 3

  1. Jyothilingappa
    May 7, 2020 Reply

    ಪದ್ಮಾಲಯ ರ ಕವನ ಸರಳ ಅರ್ಥಗರ್ಭಿತ.. ಹಾಡುವ ದಾಟಿ..ರಚನೆ.. ಸುಂದರ.

  2. Gangadhar navale
    May 14, 2020 Reply

    ಮನಸ್ಸಿನಲ್ಲಿರುವ ಚಿಂತೆಯೇ ಹಾವೆಂದುಕೊಂಡಿದ್ದೆ, ಚಿಂತೆಯೊಳಗೆ ಇರೋ ಹಾವು ಯಾವುದು? ಚಿಂತೆಯಲ್ಲಿರುವ ಹಾವು ಭ್ರಮೆಯೇ ಇರಬಹುದೆಂದುಕೊಂಡೆ.

  3. Chandru pujar
    Aug 25, 2020 Reply

    Dhanyvad Sar Tumba chennagide

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಮನಸ್ಸು
ಮನಸ್ಸು
September 7, 2020
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
Copyright © 2026 Bayalu