Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೆಸರಿಲ್ಲದಾ ಊರಿನ ಹಾಡು
Share:
Poems May 6, 2020 ಪದ್ಮಾಲಯ ನಾಗರಾಜ್

ಹೆಸರಿಲ್ಲದಾ ಊರಿನ ಹಾಡು

ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ
ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ//

ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ
ಶೋಕಿ ದಾರಿಯು ತಾನೇ ಆಗುತಾ/ ಮಾಯೆಯೊಳಗೇ ಹಬ್ಬತೋ //ಅ.ಪ//

ಮೂರು ದಾರಿ ಸೇರೋ ಜಾಗದಿ ಗೂಡು ಕಟ್ಟಿ ಕುಣಿಯಿತೋ
ಗಂಡೂ ಅಲ್ಲಾ ಹೆಣ್ಣು ಅಲ್ಲದು/ ಆಟತಿಳಿದು ನಡೆಯಿರೋ //ಚಿಂತೆ//

ಹರಿವು ನದಿದಡಲಿ ಬೆಳೆದಾ/ ದಿಕ್ಕುಗಾಣದ ಮರವಿದೋ
ತಾಯಿ ತಂದೆ ಇದಕಾರಿಲ್ಲ/ ಹುಚ್ಚು ಕುದುರೆ ಪಯಣವೋ //ಚಿಂತೆ//

ರಂಕುಮುಂಡೆಯ ಮಡಿಲಲಿ ಚಿಂತೆ/ ಇಲ್ಲದೇ ತಾ ತೋರಿತೋ
ದಾಟ ಹೋಗಿ ಇದನೂ ಗೆದ್ದರು/ ಕೋಟಿಗೊಬ್ಬರು ನಿಜವಹುದೋ //ಚಿಂತೆ//

ಹೆಸರಾ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲು ಇದ್ದಿತೋ
ಮೂರನಾಗಿಸಿ ಕೊಂದೇ ಹಾಕಿತ/ ಇದರ ನಿಜವನು ಅರಿಯಿರೋ.

-ಪದ್ಮಾಲಯ ನಾಗರಾಜ್

Previous post ಮನವೇ ಮನವೇ…
ಮನವೇ ಮನವೇ…
Next post WHO AM I?
WHO AM I?

Related Posts

ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...

Comments 3

  1. Jyothilingappa
    May 7, 2020 Reply

    ಪದ್ಮಾಲಯ ರ ಕವನ ಸರಳ ಅರ್ಥಗರ್ಭಿತ.. ಹಾಡುವ ದಾಟಿ..ರಚನೆ.. ಸುಂದರ.

  2. Gangadhar navale
    May 14, 2020 Reply

    ಮನಸ್ಸಿನಲ್ಲಿರುವ ಚಿಂತೆಯೇ ಹಾವೆಂದುಕೊಂಡಿದ್ದೆ, ಚಿಂತೆಯೊಳಗೆ ಇರೋ ಹಾವು ಯಾವುದು? ಚಿಂತೆಯಲ್ಲಿರುವ ಹಾವು ಭ್ರಮೆಯೇ ಇರಬಹುದೆಂದುಕೊಂಡೆ.

  3. Chandru pujar
    Aug 25, 2020 Reply

    Dhanyvad Sar Tumba chennagide

Leave a Reply to Gangadhar navale Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾತು ಮಾಯೆ
ಮಾತು ಮಾಯೆ
July 4, 2021
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
Copyright © 2026 Bayalu