Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಲಿಂಗಾಚಾರ
ಲಿಂಗಾಚಾರ
May 6, 2021
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
Copyright © 2025 Bayalu