Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ತುತ್ತೂರಿ…
ತುತ್ತೂರಿ…
June 10, 2023
ಶಾಂತಿ
ಶಾಂತಿ
April 11, 2025
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ಸುಮ್ಮನೆ ಇರು
ಸುಮ್ಮನೆ ಇರು
December 6, 2020
Copyright © 2026 Bayalu