Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಕಾಯಕಯೋಗಿನಿ ಕದಿರ ರೆಮ್ಮವ್ವೆ
ಕಾಯಕಯೋಗಿನಿ ಕದಿರ ರೆಮ್ಮವ್ವೆ
April 29, 2018
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ನನ್ನೆದುರು ನಾ…
ನನ್ನೆದುರು ನಾ…
March 6, 2024
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಸಂತೆಯ ಸಂತ
ಸಂತೆಯ ಸಂತ
September 7, 2020
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
Copyright © 2025 Bayalu