Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಾರಿ ಬಿಡಿ…
ದಾರಿ ಬಿಡಿ…
December 6, 2020
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
WHO AM I?
WHO AM I?
June 17, 2020
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ದಾಸೋಹ ತತ್ವ
ದಾಸೋಹ ತತ್ವ
January 10, 2021
Copyright © 2026 Bayalu