Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೆಸರಿಲ್ಲದಾ ಊರಿನ ಹಾಡು
Share:
Poems May 6, 2020 ಪದ್ಮಾಲಯ ನಾಗರಾಜ್

ಹೆಸರಿಲ್ಲದಾ ಊರಿನ ಹಾಡು

ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ
ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ//

ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ
ಶೋಕಿ ದಾರಿಯು ತಾನೇ ಆಗುತಾ/ ಮಾಯೆಯೊಳಗೇ ಹಬ್ಬತೋ //ಅ.ಪ//

ಮೂರು ದಾರಿ ಸೇರೋ ಜಾಗದಿ ಗೂಡು ಕಟ್ಟಿ ಕುಣಿಯಿತೋ
ಗಂಡೂ ಅಲ್ಲಾ ಹೆಣ್ಣು ಅಲ್ಲದು/ ಆಟತಿಳಿದು ನಡೆಯಿರೋ //ಚಿಂತೆ//

ಹರಿವು ನದಿದಡಲಿ ಬೆಳೆದಾ/ ದಿಕ್ಕುಗಾಣದ ಮರವಿದೋ
ತಾಯಿ ತಂದೆ ಇದಕಾರಿಲ್ಲ/ ಹುಚ್ಚು ಕುದುರೆ ಪಯಣವೋ //ಚಿಂತೆ//

ರಂಕುಮುಂಡೆಯ ಮಡಿಲಲಿ ಚಿಂತೆ/ ಇಲ್ಲದೇ ತಾ ತೋರಿತೋ
ದಾಟ ಹೋಗಿ ಇದನೂ ಗೆದ್ದರು/ ಕೋಟಿಗೊಬ್ಬರು ನಿಜವಹುದೋ //ಚಿಂತೆ//

ಹೆಸರಾ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲು ಇದ್ದಿತೋ
ಮೂರನಾಗಿಸಿ ಕೊಂದೇ ಹಾಕಿತ/ ಇದರ ನಿಜವನು ಅರಿಯಿರೋ.

-ಪದ್ಮಾಲಯ ನಾಗರಾಜ್

Previous post ಮನವೇ ಮನವೇ…
ಮನವೇ ಮನವೇ…
Next post WHO AM I?
WHO AM I?

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ಹೀಗೊಂದು ಸಂವಾದ…
Share:
Poems

ಹೀಗೊಂದು ಸಂವಾದ…

April 6, 2023 ಕೆ.ಆರ್ ಮಂಗಳಾ
ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...

Comments 3

  1. Jyothilingappa
    May 7, 2020 Reply

    ಪದ್ಮಾಲಯ ರ ಕವನ ಸರಳ ಅರ್ಥಗರ್ಭಿತ.. ಹಾಡುವ ದಾಟಿ..ರಚನೆ.. ಸುಂದರ.

  2. Gangadhar navale
    May 14, 2020 Reply

    ಮನಸ್ಸಿನಲ್ಲಿರುವ ಚಿಂತೆಯೇ ಹಾವೆಂದುಕೊಂಡಿದ್ದೆ, ಚಿಂತೆಯೊಳಗೆ ಇರೋ ಹಾವು ಯಾವುದು? ಚಿಂತೆಯಲ್ಲಿರುವ ಹಾವು ಭ್ರಮೆಯೇ ಇರಬಹುದೆಂದುಕೊಂಡೆ.

  3. Chandru pujar
    Aug 25, 2020 Reply

    Dhanyvad Sar Tumba chennagide

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
Copyright © 2025 Bayalu