Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯ ಸಂತ
Share:
Poems September 7, 2020 ಜ್ಯೋತಿಲಿಂಗಪ್ಪ

ಸಂತೆಯ ಸಂತ

ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ
ಕಣ್ಣಿಗೆ ಕರುಳು ಇರಬಾರದು
ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ
ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ

ಈ ಮೂರು ಮೊಳದ ಗುಂಡಿಯ ತೋಡುವರೈದು ಮಂದಿ
ಓಡುವ ಸೂರ್ಯನ ಹಿಡಿಯಲಾಗದು ನೆರಳು
ಬಿಡಮ್ಮಾ ಇದು ಯಾವ ತತ್ವದ ಹಾಡೋ
ತಂಬೂರಿ ಮೀಟುವ ಬೆರಳು ಮೊಂಡು

ನೆನೆದರೆ ಕಾಡುವುದು ಮರೆಹು
ಮರೆದರೆ ಕಾಡುವುದು ನೆನಹು
ಅರಿದರೆ ಕಾಡುವುದು ನೆನಹು ಮರೆಹು
ಶಬ್ದದೊಳಗಣ ನಿಸದ್ದುವ ಬಲ್ಲವರೇ ಬಲ್ಲರು

ನಿನ್ನಿಂದ ನಾನರಿದೆನಲ್ಲದೆ ಎನ್ನಿಂದ ನೀನಾಗಲಿಲ್ಲ
ಅಂತರಂಗದಲಿ ಅಡಗಿಸಿಟ್ಟ ಭಾವ
ಬಹಿರಂಗದಲಿ ಪೂಜೆಗೊಳ್ಳದು
ಕಣ್ಣ ಒಳಗಣ ಬಿಂಬ ಕಣ್ಣಿಗೆ ಇಂಬು

ಬೆಟ್ಟ ಏರಿ ಬಂದವನ ಕೂಡೇನು ಕಷ್ಟ ಸುಖ
ನೆಲದಲಿ ತೆವಳುವ ಮಣ್ಣು
ಮಣ್ಣಿಲ್ಲದೆ ಇರದು
ಅಂಗವಿಲ್ಲದವಗೆ ಅಂಗಿ ತೊಡಿಸಲುಂಟೇ…

Previous post ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
Next post ಮನಸ್ಸು
ಮನಸ್ಸು

Related Posts

ಸಾವಿನ ಅರಿವೆ ಕಳಚಿ!
Share:
Poems

ಸಾವಿನ ಅರಿವೆ ಕಳಚಿ!

September 14, 2024 ಜಬೀವುಲ್ಲಾ ಎಂ.ಅಸದ್
ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...
ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...

Comments 2

  1. Mariswamy Gowdar
    Sep 10, 2020 Reply

    ಕಣ್ಣೊಳಗಣ ಕರುಳು ಹಿಂಗಿದಲ್ಲದೆ ನಿನ್ನ ನೋಡಲಾಗದು… ವಚನ ನೆನಪಿಸಿದಿರಿ. ಸುಂದರ ಕವನ.

  2. Nagaraju M.P
    Sep 13, 2020 Reply

    ಕವನ abstract art ಅನ್ನು ನೆನಪಿಸುವಂತಿದೆ. ನಿಮ್ಮ ಅಲ್ಲಮ ಮತ್ತು ಅಕ್ಕನ ನೆನಪಿನ ಕವನಗಳನ್ನು ನಾನು ಓದಿದ್ದೇನೆ, ಚೆನ್ನಾಗಿವೆ ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ಗುರುಪಥ
ಗುರುಪಥ
January 4, 2020
ದಾರಿ ಬಿಡಿ…
ದಾರಿ ಬಿಡಿ…
December 6, 2020
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
Copyright © 2026 Bayalu