Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ವಚನ – ಚಿಂತನ
ವಚನ – ಚಿಂತನ
October 10, 2023
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಮರೆತೆ…
ಮರೆತೆ…
July 4, 2022
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಶಿವನ ಕುದುರೆ…
ಶಿವನ ಕುದುರೆ…
May 1, 2019
Copyright © 2026 Bayalu