Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಹುಡುಕಾಟ
ಹುಡುಕಾಟ
July 21, 2024
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಹಾಯ್ಕು
ಹಾಯ್ಕು
September 6, 2023
ಹಣತೆ ಸಾಕು
ಹಣತೆ ಸಾಕು
September 14, 2024
ಕಣ್ಣ ದೀಪ
ಕಣ್ಣ ದೀಪ
September 7, 2021
ಆಸರೆ
ಆಸರೆ
August 6, 2022
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
Copyright © 2025 Bayalu