Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
Copyright © 2025 Bayalu