Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ಸಂತೆಯ ಸಂತ
Share:
Poems

ಸಂತೆಯ ಸಂತ

September 7, 2020 ಜ್ಯೋತಿಲಿಂಗಪ್ಪ
ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಅನುಭವ ಮಂಟಪ
ಅನುಭವ ಮಂಟಪ
April 11, 2025
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
Copyright © 2026 Bayalu