Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ನೆಲದ ನಿಧಾನ
Share:
Poems

ನೆಲದ ನಿಧಾನ

April 29, 2018 ಕೆ.ಆರ್ ಮಂಗಳಾ
ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಸನಾತನ ಧರ್ಮ
ಸನಾತನ ಧರ್ಮ
October 10, 2023
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಗಣಾಚಾರ
ಗಣಾಚಾರ
August 8, 2021
ಅನುಭವ ಮಂಟಪ: ಮುಂದೇನು?
ಅನುಭವ ಮಂಟಪ: ಮುಂದೇನು?
April 5, 2026
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ತುತ್ತೂರಿ…
ತುತ್ತೂರಿ…
June 10, 2023
Copyright © 2026 Bayalu