Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
Copyright © 2026 Bayalu