Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

October 21, 2024 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಣಾಚಾರ
ಗಣಾಚಾರ
August 8, 2021
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ನಾನು  ಬಿಂಬ
ನಾನು ಬಿಂಬ
September 13, 2025
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
Copyright © 2026 Bayalu