Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಣ್ಣ ದೀಪ
ಕಣ್ಣ ದೀಪ
September 7, 2021
ಲಿಂಗಾಚಾರ
ಲಿಂಗಾಚಾರ
May 6, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಶರಣ- ಎಂದರೆ…
ಶರಣ- ಎಂದರೆ…
March 6, 2020
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
Copyright © 2026 Bayalu