Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುಟುಕು ಆಸೆ…
ಗುಟುಕು ಆಸೆ…
May 8, 2024
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
Copyright © 2026 Bayalu