Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಶರಣನಾಗುವುದು…
ಶರಣನಾಗುವುದು…
February 10, 2023
ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ
February 16, 2026
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಭಾರ
ಭಾರ
October 6, 2020
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಕನ್ನಡಿ ನಂಟು
ಕನ್ನಡಿ ನಂಟು
October 10, 2023
Copyright © 2026 Bayalu