Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
WHO AM I?
WHO AM I?
June 17, 2020
Copyright © 2026 Bayalu