Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗಣ ಮರ
ಒಳಗಣ ಮರ
March 12, 2022
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
Copyright © 2025 Bayalu