Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ನೆಲದ ನಿಧಾನ
Share:
Poems

ನೆಲದ ನಿಧಾನ

April 29, 2018 ಕೆ.ಆರ್ ಮಂಗಳಾ
ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು?
ನಾನು ಯಾರು?
December 8, 2021
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ದೇಹ ದೇವಾಲಯ
ದೇಹ ದೇವಾಲಯ
June 12, 2025
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
Copyright © 2026 Bayalu